ಆರ್ಎಸ್ಎಸ್ ಮತ್ತು ಹಿಂದೂ ಮಹಾಸಭಾ ಧೋರಣೆಗಳನ್ನು ಟೀಕಿಸಿದ ಅವರು, ‘ಭಾರತ ಬಿಟ್ಟು ತೊಲಗಿ ಚಳವಳಿ ನಡೆಯುವಾಗ ನೀವು ಎಲ್ಲಿಗೆ ಹೋಗಿದ್ದೀರಿ? ಆಗ ಹಿಂದೂ ಮಹಾಸಭಾ ಇರಲಿಲ್ವಾ? ಆರ್ಎಸ್ಎಸ್ ಇರಲಿಲ್ವಾ? ಕಸ್ತೂರ್ ಬಾ ಮೃತಪಟ್ಟಾಗ ನಿಮಗೆ ದುಃಖ ಆಗಲಿಲ್ವಾ? ಈಗ ಎಂಥ ದೇಶಭಕ್ತಿ, ಮಹಾನ್ ದೇಶಭಕ್ತಿ ನಿಮ್ಮದು. ಭಾರತ್ ಮಾತಾಕೀ ಜೈ ಎಂದು ಈಗ ಹೇಳುತ್ತೀರಿ. ಯಾವ ಭಾರತ ಮಾತೆ, ಅಂಬಾನಿ ಮಾತೆಯಾ? ಅದಾನಿ ಮಾತೆಯಾ ಅಥವಾ ಭಗತ್ ಸಿಂಗ್ ಭಾರತ್ ಮಾತೆಯಾ’ ಎಂದು ಪ್ರಶ್ನಿಸಿದರು.