ಬೆಂಗಳೂರು: ‘ದಿನೇ ದಿನೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯಾಗುತ್ತಿದೆ. ತೈಲದ ಮೇಲಿನ ಸೆಸ್ನಿಂದ 2020-21ರ ಆರ್ಥಿಕ ವರ್ಷದಲ್ಲಿ ₹ 20 ಲಕ್ಷ ಕೋಟಿ ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ಮೋದಿ ಸರ್ಕಾರ ಜನರ ಮೇಲೆ ಇನ್ನಷ್ಟು ಹೊರೆ ಹೊರಿಸುತ್ತಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದರು.