‘40 ವರ್ಷಗಳಿಂದ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಇದುವರೆಗಿನ ವೈಜ್ಞಾನಿಕ ಸಾಧನೆಗಳನ್ನು ಪರಿಗಣಿಸಿ ಅಕಾಡೆಮಿ ಆಯ್ಕೆ ಮಾಡಿದೆ. ರಾಜ್ಯದ ವಿಶ್ವವಿದ್ಯಾಲಯಗಳಿಂದ ಆಯ್ಕೆಯಾದ ಮೊದಲ ವ್ಯಕ್ತಿ ಎನಿಸಿದ್ದು ಹೆಮ್ಮೆಯ ಸಂಗತಿಯಾಗಿದೆ. 2022ನೇ ಸಾಲಿನಲ್ಲಿ ದೇಶದಿಂದ ಆಯ್ಕೆಯಾದ ಏಕೈಕ ವ್ಯಕ್ತಿ ನಾನು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.