ಮಡಿಕೇರಿ: ‘ಮುಖ್ಯಮಂತ್ರಿ ಬದಲಾದರೆ ಸಚಿವ ಸಂಪುಟಕ್ಕೂ ಹೊಸಬರ ಸೇರ್ಪಡೆ ಆಗಬೇಕು. ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿ’ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಸೋಮವಾರ ಹೇಳಿದರು.
‘ನಾನೂ ಐದು ಬಾರಿ ಗೆದ್ದಿದ್ದೇನೆ. ಸಿ.ಎಂ ಬದಲಾದರೆ ಸಚಿವ ಸಂಪುಟವೂ ಬದಲಾಗಲಿದೆ. ಆಗ ನನಗೆ ಸಚಿವ ಸ್ಥಾನ ಕೊಡಲೇ ಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಇರುತ್ತೇನೆ’ ಎಂದು ಹೇಳಿದರು.