ಮಠದ ಆವರಣ ಪ್ರವೇಶಿಸುವ ಪ್ರತಿ ವಾಹನ, ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ. ದೀಕ್ಷೆ ಪಡೆದ ಮಾಠಾಧೀಶರು ಹಾಗೂ ರಾಜಕೀಯ ಮುಖಂಡರು ಮುರುಘಾ ಮಠಕ್ಕೆ ಧಾವಿಸಿ ಶರಣರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್.ಲಿಂಗಮೂರ್ತಿ, ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಆನಂದಪ್ಪ ಮಠಕ್ಕೆ ಭೇಟಿ ನೀಡಿದ್ದರು.