ತೀರ್ಥಹಳ್ಳಿ: ಆರಗ ಸಮೀಪ ಗ್ರಾಮವೊಂದರಲ್ಲಿ ಪರಿಶಿಷ್ಟ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.
ಸಂಪತ್ ಮತ್ತು ಆದರ್ಶ್ ಬಂಧಿತರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ತೀರ್ಥಹಳ್ಳಿ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ ಪ್ರಕರಣ ತನಿಖೆ ವಿಚಾರವಾಗಿ ಚರ್ಚಿಸಿದರು.
ದೌರ್ಜನ್ಯಕ್ಕೆ ಒಳಗಾದ ದಂಪತಿ ತಾಲ್ಲೂಕು ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.