<p><strong>ಬೆಂಗಳೂರು:</strong> ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಚಾಮರಾಜಪೇಟೆ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ವಿಶ್ವನಾಥ್ ಬಿರಾದಾರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.</p>.<p>ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.</p>.<p>‘ವಿಶ್ವನಾಥ್ ಹಾಗೂ ಬೆಂಗಳೂರಿನ 30 ವರ್ಷದ ಯುವತಿ ನಡುವೆ ಸ್ನೇಹ ಏರ್ಪಟ್ಟಿತ್ತು ಎನ್ನಲಾಗಿದೆ. ಯುವತಿ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ವಿಶ್ವನಾಥ್, ‘ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನನ್ನನ್ನು ಬೆದರಿಸುತ್ತಿದ್ದಾರೆ’ ಎಂದಿದ್ದರು. ಅದಕ್ಕೆ ಪ್ರತಿ ದೂರು ನೀಡಿದ್ದ ಯುವತಿ, ‘ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದ ವಿಶ್ವನಾಥ್, ಧರ್ಮಸ್ಥಳಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದಿದ್ದರು’ ಎಂಬುದಾಗಿ ಮೂಲಗಳು ತಿಳಿಸಿವೆ.</p>.<p>’ಕರ್ತವ್ಯನಿರತ ಪಿಎಸ್ಐ ಮೇಲೆ ದಾಖಲಾಗಿದ್ದ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಎಸ್ಪಿ, ನಗರ ಪೊಲೀಸ್ ಕಮಿಷನರ್ ಅವರಿಗೆ ವರದಿ ಕಳುಹಿಸಿದ್ದರು. ಆ ವರದಿ ಆಧರಿಸಿ ವಿಶ್ವನಾಥ್ ಬಿರಾದಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಚಾಮರಾಜಪೇಟೆ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ವಿಶ್ವನಾಥ್ ಬಿರಾದಾರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.</p>.<p>ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.</p>.<p>‘ವಿಶ್ವನಾಥ್ ಹಾಗೂ ಬೆಂಗಳೂರಿನ 30 ವರ್ಷದ ಯುವತಿ ನಡುವೆ ಸ್ನೇಹ ಏರ್ಪಟ್ಟಿತ್ತು ಎನ್ನಲಾಗಿದೆ. ಯುವತಿ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ವಿಶ್ವನಾಥ್, ‘ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನನ್ನನ್ನು ಬೆದರಿಸುತ್ತಿದ್ದಾರೆ’ ಎಂದಿದ್ದರು. ಅದಕ್ಕೆ ಪ್ರತಿ ದೂರು ನೀಡಿದ್ದ ಯುವತಿ, ‘ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದ ವಿಶ್ವನಾಥ್, ಧರ್ಮಸ್ಥಳಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದಿದ್ದರು’ ಎಂಬುದಾಗಿ ಮೂಲಗಳು ತಿಳಿಸಿವೆ.</p>.<p>’ಕರ್ತವ್ಯನಿರತ ಪಿಎಸ್ಐ ಮೇಲೆ ದಾಖಲಾಗಿದ್ದ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಎಸ್ಪಿ, ನಗರ ಪೊಲೀಸ್ ಕಮಿಷನರ್ ಅವರಿಗೆ ವರದಿ ಕಳುಹಿಸಿದ್ದರು. ಆ ವರದಿ ಆಧರಿಸಿ ವಿಶ್ವನಾಥ್ ಬಿರಾದಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>