ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರತ್ ವರ್ಗಾವಣೆ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

Last Updated 5 ಡಿಸೆಂಬರ್ 2020, 3:04 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ದಿಢೀರ್ ವರ್ಗಾವಣೆ ಪ್ರಶ್ನಿಸಿ ಕೇಂದ್ರ ಆಡಳಿತ ಮಂಡಳಿಗೆ (ಸಿಎಟಿ) ಬಿ.ಶರತ್ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.11ಕ್ಕೆ ಮುಂದೂಡಿಕೆಯಾಗಿದೆ.

ಸರ್ಕಾರದ ಪರ ವಕೀಲರು ಸಿಎಟಿ ಮುಂದೆ ಹಾಜರಾಗಿ ತಮ್ಮ ವಾದ ಮಂಡಿಸಿದ್ದಾರೆ. ಈಗ ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಪರ ವಕೀಲರು ಅಭಿಪ್ರಾಯ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ವಿಚಾರಣೆ ದಿನವೇ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಸಿಎಟಿ ಮೂಲಗಳು ತಿಳಿಸಿವೆ.

ಕಲಬುರ್ಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಅದಾದ ಒಂದೇ ತಿಂಗಳಲ್ಲಿ ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿತ್ತು. ಇದು ನಿಯಮ ಬಾಹಿರ ಆದೇಶವಾಗಿದ್ದು, ರದ್ದುಗೊಳಿಸಬೇಕು ಎಂದು ಶರತ್ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT