ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ದಿಢೀರ್ ವರ್ಗಾವಣೆ ಪ್ರಶ್ನಿಸಿ ಕೇಂದ್ರ ಆಡಳಿತ ಮಂಡಳಿಗೆ (ಸಿಎಟಿ) ಬಿ.ಶರತ್ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.11ಕ್ಕೆ ಮುಂದೂಡಿಕೆಯಾಗಿದೆ.
ಸರ್ಕಾರದ ಪರ ವಕೀಲರು ಸಿಎಟಿ ಮುಂದೆ ಹಾಜರಾಗಿ ತಮ್ಮ ವಾದ ಮಂಡಿಸಿದ್ದಾರೆ. ಈಗ ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಪರ ವಕೀಲರು ಅಭಿಪ್ರಾಯ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ವಿಚಾರಣೆ ದಿನವೇ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಸಿಎಟಿ ಮೂಲಗಳು ತಿಳಿಸಿವೆ.
ಕಲಬುರ್ಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಅದಾದ ಒಂದೇ ತಿಂಗಳಲ್ಲಿ ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿತ್ತು. ಇದು ನಿಯಮ ಬಾಹಿರ ಆದೇಶವಾಗಿದ್ದು, ರದ್ದುಗೊಳಿಸಬೇಕು ಎಂದು ಶರತ್ ಅರ್ಜಿ ಸಲ್ಲಿಸಿದ್ದಾರೆ.