ಬೆಂಗಳೂರು: ಪಡಿತರ ಧಾನ್ಯಗಳ ಜೊತೆ ಮಂಡ್ಯ ಜಿಲ್ಲೆಯ ಆಲೆಮನೆ ಬೆಲ್ಲ ವನ್ನೂ ವಿತರಿಸುವ ಮೂಲಕ ಅವುಗಳ ಪುನಶ್ಚೇತನಕ್ಕೆ ಒತ್ತು ನೀಡಬೇಕು ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಮತ್ತು ಕೆ.ಸಿ.ನಾರಾಯಣಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆಹಾರ ಸಚಿವ ಉಮೇಶ ಕತ್ತಿ ಅವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರವು ‘ಆತ್ಮನಿರ್ಭರ ಭಾರತ’ ಯೊಜನೆಯಡಿ ಮಂಡ್ಯ ಜಿಲ್ಲೆಯ ಆಲೆಮನೆಗಳನ್ನು ಆಯ್ಕೆ ಮಾಡಿದೆ. ಇದಕ್ಕೆ ಆತ್ಮನಿರ್ಭರ ಭಾರತ ಯೋಜನೆಯಡಿ ಸಾಲ ನೀಡುವ ಮೊದಲು ಇವುಗಳ ಪುನಶ್ಚೇತನ ಮಾಡಬೇಕಿದೆ. ಕೆಲವು ಮೂಲ ಸೌಲಭ್ಯಗಳನ್ನೂ ಒದಗಿಸಬೇಕಿದೆ ಎಂದು ಹೇಳಿದ್ದಾರೆ.