‘ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದೇ ಕಿರುಕುಳ ನೀಡುವ ಉದ್ದೇಶದಿಂದಲೇ ಅವಧಿಗೆ ಮುನ್ನವೇ ನನ್ನನ್ನು ವರ್ಗಾವಣೆ ಮಾಡಲಾಗಿದೆ. ನಕಲಿ ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದರಿಂದಲೇ ನನ್ನನ್ನು ವರ್ಗಾವಣೆ ಮಾಡಲಾಯಿತು. 1995ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ನಿಯಮಗಳ ಅನ್ವಯ ರಕ್ಷಣಾ ಘಟಕ ಸ್ಥಾಪಿಸಿ ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಕೋರಿದ್ದೆ. ಆದರೆ, ಅವರು ನಿರ್ಲಕ್ಷ್ಯ ವಹಿಸಿದರು’ ಎಂದಿದ್ದಾರೆ.