ಆರನೇ ವೇತನ ಆಯೋಗದ ಶಿಫಾರಸುಗಳನ್ನು ಸಾರಿಗೆ ನೌಕರರಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಿ 2021ರ ಏಪ್ರಿಲ್ 7ರಿಂದ 21ರವರೆಗೆ ನೌಕರರು ಮುಷ್ಕರ ನಡೆಸಿದ್ದರು. ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರನ್ನು ವಜಾಗೊಳಿಸಲಾಗಿತ್ತು. ಅವರಲ್ಲಿ 1,351 ನೌಕರರ ಮರು ನೇಮಕ ವಿಷಯ ಇತ್ಯರ್ಥಪಡಿಸುವಂತೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆಸಾರಿಗೆ ಇಲಾಖೆ ಸೂಚನೆ ನೀಡಿದೆ.