<p><strong>ವಿಜಯಪುರ</strong>: ರಾಜ್ಯದಲ್ಲಿರುವ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹುನಮಂತಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಷ್ಟ್ರೀಯ ಕಾನೂನು ಕಾಲೇಜು ಸಮೀಕ್ಷೆ ನಡೆಸಲಿದೆ ಎಂದರು.</p>.<p>ಮೊದಲ ಹಂತದಲ್ಲಿ ಮೈಸೂರು, ಬಳ್ಳಾರಿ ಜಿಲ್ಲೆಗಳಲ್ಲಿ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಯಲಿದ್ದು, ಈ ಜಿಲ್ಲೆಗಳ ವರದಿ ಆಧರಿಸಿ ಬಳಿಕ ಉಳಿದ ಜಿಲ್ಲೆಗಳ ಸಮೀಕ್ಷೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಸಮೀಕ್ಷೆ ಬಳಿಕ ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಹೇಳಿದರು.</p>.<p>2003ರಲ್ಲಿ ನಡೆದಿದ್ದ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 1,42,290 ಜನ ಇರುವುದಾಗಿ ತಿಳಿದುಬಂದಿತ್ತು. ಆದರೆ, ಇದೀಗ ಈ ಸಂಖ್ಯೆ ಮೂರು ಲಕ್ಷಕ್ಕೂ ಅಧಿಕವಾಗಿರುವ ಸಾಧ್ಯತೆ ಇದೆ ಎಂದು ಹೇಳಿದರು.</p>.<p>ಸಮೀಕ್ಷಾ ವರದಿ ಬಂದ ಬಳಿಕ ಸಫಾಯಿ ಕರ್ಮಚಾರಿಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದರು.</p>.<p>ಮುಂಬರುವ ರಾಜ್ಯ ಬಜೆಟ್ನಲ್ಲಿ ನಿಗಮಕ್ಕೆ ₹ 1 ಸಾವಿರ ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಹಾಗೂ ಕೇಂದ್ರ ಸರ್ಕಾರದಿಂದ ₹ 500 ಕೋಟಿ ಅನುದಾನ ನೀಡುವಂತೆ ಕೋರಿದ್ದೇನೆ ಎಂದು ಹೇಳಿದರು.</p>.<p>ಕಳೆದ ಬಜೆಟ್ನಲ್ಲಿ ನಿಗಮಕ್ಕೆ ಮಂಜೂರಾಗಿದ್ದ ₹66 ಕೋಟಿ ಅನುದಾನ ಕೋವಿಡ್ ಸಂಕಷ್ಟದಿಂದಾಗಿ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗದೇ ನಿರೀಕ್ಷಿತ ಕೆಲಸ, ಕಾರ್ಯಗಳು ನಡೆದಿಲ್ಲ. ಇದೀಗ ನಿಧಾನವಾಗಿ ಅನುದಾನ ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರಲೆ, ಮುಖಂಡರಾದ ಮಲ್ಲಿಕಾರ್ಜುನ ಹಳೆಮನಿ, ಚಿದಾನಂದ ಚಲುವಾದಿ, ಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ರಾಜ್ಯದಲ್ಲಿರುವ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹುನಮಂತಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಷ್ಟ್ರೀಯ ಕಾನೂನು ಕಾಲೇಜು ಸಮೀಕ್ಷೆ ನಡೆಸಲಿದೆ ಎಂದರು.</p>.<p>ಮೊದಲ ಹಂತದಲ್ಲಿ ಮೈಸೂರು, ಬಳ್ಳಾರಿ ಜಿಲ್ಲೆಗಳಲ್ಲಿ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಯಲಿದ್ದು, ಈ ಜಿಲ್ಲೆಗಳ ವರದಿ ಆಧರಿಸಿ ಬಳಿಕ ಉಳಿದ ಜಿಲ್ಲೆಗಳ ಸಮೀಕ್ಷೆ ಮಾಡಲಾಗುವುದು ಎಂದು ತಿಳಿಸಿದರು.</p>.<p>ಸಮೀಕ್ಷೆ ಬಳಿಕ ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಹೇಳಿದರು.</p>.<p>2003ರಲ್ಲಿ ನಡೆದಿದ್ದ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 1,42,290 ಜನ ಇರುವುದಾಗಿ ತಿಳಿದುಬಂದಿತ್ತು. ಆದರೆ, ಇದೀಗ ಈ ಸಂಖ್ಯೆ ಮೂರು ಲಕ್ಷಕ್ಕೂ ಅಧಿಕವಾಗಿರುವ ಸಾಧ್ಯತೆ ಇದೆ ಎಂದು ಹೇಳಿದರು.</p>.<p>ಸಮೀಕ್ಷಾ ವರದಿ ಬಂದ ಬಳಿಕ ಸಫಾಯಿ ಕರ್ಮಚಾರಿಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದರು.</p>.<p>ಮುಂಬರುವ ರಾಜ್ಯ ಬಜೆಟ್ನಲ್ಲಿ ನಿಗಮಕ್ಕೆ ₹ 1 ಸಾವಿರ ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಹಾಗೂ ಕೇಂದ್ರ ಸರ್ಕಾರದಿಂದ ₹ 500 ಕೋಟಿ ಅನುದಾನ ನೀಡುವಂತೆ ಕೋರಿದ್ದೇನೆ ಎಂದು ಹೇಳಿದರು.</p>.<p>ಕಳೆದ ಬಜೆಟ್ನಲ್ಲಿ ನಿಗಮಕ್ಕೆ ಮಂಜೂರಾಗಿದ್ದ ₹66 ಕೋಟಿ ಅನುದಾನ ಕೋವಿಡ್ ಸಂಕಷ್ಟದಿಂದಾಗಿ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗದೇ ನಿರೀಕ್ಷಿತ ಕೆಲಸ, ಕಾರ್ಯಗಳು ನಡೆದಿಲ್ಲ. ಇದೀಗ ನಿಧಾನವಾಗಿ ಅನುದಾನ ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತರಲೆ, ಮುಖಂಡರಾದ ಮಲ್ಲಿಕಾರ್ಜುನ ಹಳೆಮನಿ, ಚಿದಾನಂದ ಚಲುವಾದಿ, ಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>