ತಾಲ್ಲೂಕಿನ ಭೀಮರಾಯನಗುಡಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ರೈತರ ಹೋರಾಟಕ್ಕೆ ನಮ್ಮ ಪಕ್ಷದ ಬೆಂಬಲ ಸದಾ ಇದೆ. ಕೃಷಿ ಸಚಿವಬಿ.ಸಿ.ಪಾಟೀಲ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಉಡಾಫೆ ಹೇಳಿಕೆ ನೀಡುವುದು ಸರಿಯಲ್ಲ. ಆಡಳಿತ ನಡೆಸುವುದರಲ್ಲಿ ಬಿಜೆಪಿ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ’ ಎಂದು ಆರೋಪಿಸಿದರು.