‘ಮೂರು ವರ್ಷದ ಹಿಂದೆ ಇಲ್ಲಿನ ಕನ್ನಡ ಶಾಲೆಗಳಿಗೆ ಮಲಯಾಳ ಶಿಕ್ಷಕರ ನೇಮಕ ಆಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ, ಶಿಕ್ಷಕರನ್ನು ಕೇರಳ ಸರ್ಕಾರ ವಾಪಸು ಕರೆದುಕೊಂಡಿತ್ತು. ಈಗ ಮತ್ತೆ ಕನ್ನಡ ಗೊತ್ತಿಲ್ಲದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಮಕ್ಕಳಿಗೆ ಮಲಯಾಳ ಭಾಷೆ ಗೊತ್ತಿಲ್ಲ, ಶಿಕ್ಷಕರಿಗೆ ಕನ್ನಡ ಗೊತ್ತಿಲ್ಲದೇ ಇರುವುದರಿಂದ ಈ ಶಾಲೆಗಳಲ್ಲಿ ದಾಖಲಾಗುವ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಕೇರಳ ಸರ್ಕಾರದ ಮೇಲೆ ಒತ್ತಡ ತಂದು, ಗಡಿ ಭಾಗದ ವಿದ್ಯಾರ್ಥಿಗಳ ಹಿತ ಕಾಯಬೇಕು’ ಎಂದೂ ಮನವಿ ಮಾಡಿದರು.