ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಬಳ ಸಂಸ್ಥೆಗೆ ಮಾನ್ಯತೆ ನೀಡಲು ಕ್ರಮ -ಸಚಿವ ಕೋಟ ಶ್ರೀನಿವಾಸ

Last Updated 21 ಫೆಬ್ರುವರಿ 2023, 21:45 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಕಂಬಳ ಸಂಸ್ಥೆಗೆ ಮಾನ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಮಂಗಳವಾರ ನಿಯಮ 330ರ ಅಡಿ ವಿಷಯ ಪ್ರಸ್ತಾಪಿಸಿ, ‘ಕಂಬಳವನ್ನು ರಾಜ್ಯಮಟ್ಟದ ಕ್ರೀಡೆ, ಕರಾ ವಳಿಯ ನಾಡಕ್ರೀಡೆಯಾಗಿ ಘೋಷಿಸಬೇಕು’ ಎಂದು ಆಗ್ರಹಿ ಸಿದರು. ಉತ್ತರಿಸಿದ ಸಚಿವರು, ‘ರಾಜ್ಯ ಕಂಬಳ ಸಂಸ್ಥೆಯನ್ನು ಅಸ್ತಿತ್ವಕ್ಕೆ ತರುವ ಪ್ರಕ್ರಿಯೆ ಆರಂಭವಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕಂಬಳ ಕ್ರೀಡಾ ಕ್ಷೇತ್ರದ ಪ್ರಮುಖರ ಜತೆ ಸಭೆ ನಡೆಸಲಾಗಿದೆ. ದಾಖಲೆಗಳೊಂದಿಗೆ ರಾಜ್ಯ ಕ್ರೀಡಾ ಪ್ರಾಧಿಕಾರಕ್ಕೆ ಪ್ರಸ್ತಾವ ಸಲ್ಲಿಸಿ ಮಾನ್ಯತೆ ಪಡೆಯಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT