ಆರೋಪಿಗಳಾದ ರಿಹಾನ್ ಶರೀಫ್, ಮೊಹಮದ್ ಖ್ವಾಸಿಫ್, ಅಸೀಫ್ ಉಲ್ಲಾ ಖಾನ್, ಸೈಯ್ಯದ್ ಫಾರೂಕ್ ಮತ್ತು ರೋಷಲ್ ಅವರನ್ನು ಎನ್ಐಎ ಪೊಲೀಸರ ವಶಕ್ಕೆ ನೀಡಿ ನಗರದ ಎನ್ಐಎ ವಿಶೇಷ ನ್ಯಾಯಾಲಯ ಮಂಗಳವಾರ (ಏ.26) ಆದೇಶಿಸಿತ್ತು. ಇದರನ್ವಯ ಎನ್ಐಎ ಅಧಿಕಾರಿಗಳು, ಆರೋಪಿಗಳನ್ನು ವಶಕ್ಕೆ ಪಡೆಯಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾಗ ಆರೋಪಿಗಳು ಸುತಾರಾಂ ನಿರಾಕರಿಸಿದ್ದಾಗಿ ಮೂಲಗಳು ತಿಳಿಸಿವೆ.