ರಾಯಚೂರು: ಯಂತ್ರೋಪಕರಣಗಳನ್ನು ಬಳಸಿ ಕೃಷಿ ಮಾಡುವುದರಿಂದ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದನ್ನು ಬಿಎಸ್ಸಿ ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಪ್ರಾಜೆಕ್ಟ್ ಮಾಡಿ ತೋರಿಸಿರುವ ಕಲಬುರ್ಗಿಯ ರೇಖಾ ಗುಂಡಪ್ಪ ಅವರಿಗೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ 10ನೇ ಘಟಿಕೋತ್ಸವ ಸಮಾರಂಭದಲ್ಲಿ ಆರು ಚಿನ್ನದ ಪದಕಗಳು ಮತ್ತು ನಗದು ಬಹುಮಾನ ನೀಡಿ ಗಣ್ಯರು ಗೌರವಿಸಿದರು.