‘ಗ್ರಾಮಕ್ಕೆ ಸರಬರಾಜು ಆಗುತ್ತಿರುವ ನೀರಿನ ಮಾದರಿಯನ್ನು ಕೂಡಲೇ ಪರೀಕ್ಷೆಗೆ ಒಳಳಪಡಿಸಬೇಕು. ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಬೇಕು. ರಾತ್ರಿ ವೇಳೆಯಲ್ಲಿ ಗ್ರಾಮದ ತುಂಬೆಲ್ಲಾ ಧೂಮೀಕರಣ ವ್ಯವಸ್ಥೆ ಮಾಡಬೇಕು. ಗ್ರಾಮದ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ ಸರ್ವೆ ನಡೆಸಬೇಕು, ಆರೋಗ್ಯ ತಪಾಸಣೆಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಬಿ. ವೀರೇಶ, ಬಸಮ್ಮ, ಗ್ರಾಮಸ್ಥರಾದ ಜಿ.ಎಂ. ತಿಪ್ಪೇಸ್ವಾಮಿ, ಕೆ. ಪ್ರಹ್ಲಾದ, ಎಚ್. ಮಲ್ಲೇಶ್ ಆಗ್ರಹಿಸಿದ್ದಾರೆ.