ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್. ವಿಮಲಾ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು, ದೇಶದ ಪ್ರಗತಿಗೆ ಮಹಿಳೆಯರ ಕುರಿತು ಗೌರವದ ಭಾವನೆ ಅತ್ಯಗತ್ಯ. ಅವರ ಘನತೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುವ ಪ್ರತಿಜ್ಞೆ ಮಾಡೋಣ ಎಂದು ಕರೆ ನೀಡಿದ ಸಂದರ್ಭದಲ್ಲೇ ಅವರ ತವರು ರಾಜ್ಯದಲ್ಲಿ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿರುವುದು ದುರಂತವೇ ಸರಿ’ ಎಂದು ಬೇಸರ ವ್ಯಕ್ತಪಡಿಸಿದರು.