‘ರಾಜಕಾರಣದಲ್ಲಿ ಸಮಾಧಾನದಿಂದ ಇರುವವರು, ಅಸಮಾಧಾನ ಹೊಂದಿದವರು ಇದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಎಲ್ಲ 17 ಜನರೂ ಒಗ್ಗಟ್ಟಿನಿಂದ ಇದ್ದೇವೆ. ಮುನಿರತ್ನ, ವಿಶ್ವನಾಥ್, ಪ್ರತಾಪ್ ಗೌಡ ಪಾಟೀಲ್ ಅವರಿಗೂ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗಲಿದೆ. ಕಾರಣಾಂತರದಿಂದ ಮುನಿರತ್ನ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ’ ಎಂದರು.