ವಿವಾದ ಮಾಡಿಕೊಂಡಿದ್ದು ತಪ್ಪು: ‘ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಂಡಿದ್ದರೆ ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಸ್ಥಿತಿ ಮೂಡುತ್ತಿರಲಿಲ್ಲ. ಈ ಹೋರಾಟದಲ್ಲಿ ಕನ್ನಡಿಗರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.