ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ, ಜನರ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಳೆ ಸಂತ್ರಸ್ತರಿಗೆ ಸರ್ಕಾರದಿಂದ ನೀಡುವ ಎರಡು ಮೂರು ಸಾವಿರ ರೂಪಾಯಿ ಹಣ ಸಾಕಾಗುವುದಿಲ್ಲ. ಸರ್ಕಾರಿ ಪರಿಹಾರದ ಜೊತೆಗೆ ಜೆಡಿಎಸ್ ಪಕ್ಷದಿಂದ ವತಿಯಿಂದ ಪರಿಹಾರ ನೀಡುತ್ತೇವೆ’ ಎಂದರು.