<p><strong>ಬೆಂಗಳೂರು: </strong>ಸಾರ್ವಜನಿಕ ಜಾಗದಲ್ಲಿ ದೇವಾಲಯ, ಮಸೀದಿ ಹಾಗೂ ಇತರ ಧಾರ್ಮಿಕ ಕಟ್ಟಡಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡದಂತೆ ತಡೆಯಲು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ಸಲ್ಲಿಕೆಯಾಗಿರುವ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.</p>.<p>‘ಅಕ್ರಮ ನಿರ್ಮಾಣಗಳ ಬಗ್ಗೆ ಹಲವು ದೂರುಗಳು ಬಂದಿದ್ದರೂ ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದೆ. ದೂರು ಪರಿಶೀಲಿಸಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸುವ ಅಗತ್ಯವಿದೆ’ ಎಂದು ಪೀಠ ಹೇಳಿತು.</p>.<p>ಸರ್ಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ 2009ರಲ್ಲಿ ಆದೇಶ ನೀಡಿತ್ತು. ಈ ಆದೇಶ ಪಾಲನೆ ಸಂಬಂಧ ಸ್ವಯಂಪ್ರೇರಿತವಾಗಿ ಮೇಲುಸ್ತುವಾರಿ ವಹಿಸುವಂತೆ ಹೈಕೋರ್ಟ್ಗಳಿಗೆ 2018ರಲ್ಲಿ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾರ್ವಜನಿಕ ಜಾಗದಲ್ಲಿ ದೇವಾಲಯ, ಮಸೀದಿ ಹಾಗೂ ಇತರ ಧಾರ್ಮಿಕ ಕಟ್ಟಡಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡದಂತೆ ತಡೆಯಲು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ಸಲ್ಲಿಕೆಯಾಗಿರುವ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.</p>.<p>‘ಅಕ್ರಮ ನಿರ್ಮಾಣಗಳ ಬಗ್ಗೆ ಹಲವು ದೂರುಗಳು ಬಂದಿದ್ದರೂ ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದೆ. ದೂರು ಪರಿಶೀಲಿಸಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸುವ ಅಗತ್ಯವಿದೆ’ ಎಂದು ಪೀಠ ಹೇಳಿತು.</p>.<p>ಸರ್ಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ 2009ರಲ್ಲಿ ಆದೇಶ ನೀಡಿತ್ತು. ಈ ಆದೇಶ ಪಾಲನೆ ಸಂಬಂಧ ಸ್ವಯಂಪ್ರೇರಿತವಾಗಿ ಮೇಲುಸ್ತುವಾರಿ ವಹಿಸುವಂತೆ ಹೈಕೋರ್ಟ್ಗಳಿಗೆ 2018ರಲ್ಲಿ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>