ಘಟನೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಾದ್ರಿ ಕಾನ್ಸ್ಟಿ, ‘ನಮ್ಮದು ಸರ್ಕಾರೇತರ ಸಂಸ್ಥೆಯಾಗಿದ್ದು, ಶಾಲೆ ನಡೆಸುತ್ತಿದ್ದೇವೆ. ಇಲ್ಲಿ ಬುಡಕಟ್ಟು ಜನಾಂಗದವರು ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳಿಗೊಮ್ಮೆ ಬುಡಕಟ್ಟು ಜನಾಂಗದ ಶಿಕ್ಷಕರನ್ನು ಪ್ರವಾಸಕ್ಕೆ ಕರೆದೊಯ್ಯುತ್ತೇವೆ. ಈ ಬಾರಿಯೂ ಗೋವಾಕ್ಕೆ ಪ್ರವಾಸಕ್ಕೆಂದು ಹೊರಟಿದ್ದಾಗ, ಹಿಂದೂ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ದಾಳಿ ನಡೆಸಿದ್ದಾರೆ. ನಾವು ಯಾರನ್ನೂ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುತ್ತಿಲ್ಲ’ ಎಂದು ತಿಳಿಸಿದರು.