ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಲು ಸೂಚಿಸಲಾಗಿದೆ. ಮಾಲೀಕತ್ವ ಸೇರಿದಂತೆ ಆ ಜಾಗದ ದಾಖಲೆಗಳನ್ನು ಪರಿಶೀಲಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆ ಹಾಗೂ ವಕ್ಫ್ ಮಂಡಳಿಯಿಂದ ವರದಿ ಪಡೆಯಲಾಗುವುದು. ದಾಖಲೆಗಳ ಕೂಲಂಕಷ ಪರಿಶೀಲನೆ ನಡೆಸಿ, ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.