<p><strong>ಬೆಂಗಳೂರು: </strong>ರಾಜ್ಯದಲ್ಲಿ ಹೊಸದಾಗಿ ನವೀಕರಿಸಬಹುದಾದ ಇಂಧನ ನೀತಿ ಜಾರಿಗೊಳಿಸುವ ಕುರಿತು ಇಂಧನ ಇಲಾಖೆ ಗಂಭೀರ ಚಿಂತನೆ ನಡೆಸಿದೆ.</p>.<p>ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನಡೆಸಿದ ಸಭೆಯಲ್ಲಿ ಈ ನೀತಿ ಬಗ್ಗೆ ವಿಸ್ತೃತ ಚರ್ಚೆ<br />ನಡೆದಿದೆ.</p>.<p>‘ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ, ಉದ್ಯೋಗ ಅವಕಾಶ ಸೃಷ್ಟಿಸುವ ಜೊತೆಗೆ ಹಸಿರು ಇಂಧನದ ಉತ್ಪಾದನೆ, ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೀತಿ ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಇದರಿಂದ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅವಲಂಬನೆ ಪ್ರಮಾಣ ತಗ್ಗಿಸಲು ಕೂಡಾ ಸಭೆಯಲ್ಲಿ ವಿಚಾರ ವಿನಿಮಯ ನಡೆಯಿತು ಎಂದು ಮೂಲಗಳು<br />ತಿಳಿಸಿವೆ.</p>.<p>ಸಚಿವರಾಗಿ ಅಧಿಕಾರ ವಹಿಸಿಕೊಂಡ ಆರಂಭದ 100 ದಿನದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದರು. ಹಂತ ಹಂತವಾಗಿ ಇಂಧನ ಇಲಾಖೆಯಲ್ಲಿ ದಕ್ಷತೆ ಹೆಚ್ಚಿಸಿ ಪರಿಣಾಮಕಾರಿಯಾಗಿ ವಿದ್ಯುತ್ ನಿರ್ವಹಣೆಗೆ ಕ್ರಮ ವಹಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಹೊಸದಾಗಿ ನವೀಕರಿಸಬಹುದಾದ ಇಂಧನ ನೀತಿ ಜಾರಿಗೊಳಿಸುವ ಕುರಿತು ಇಂಧನ ಇಲಾಖೆ ಗಂಭೀರ ಚಿಂತನೆ ನಡೆಸಿದೆ.</p>.<p>ಇಂಧನ ಸಚಿವ ವಿ. ಸುನಿಲ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ನಡೆಸಿದ ಸಭೆಯಲ್ಲಿ ಈ ನೀತಿ ಬಗ್ಗೆ ವಿಸ್ತೃತ ಚರ್ಚೆ<br />ನಡೆದಿದೆ.</p>.<p>‘ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಉತ್ತೇಜನ, ಉದ್ಯೋಗ ಅವಕಾಶ ಸೃಷ್ಟಿಸುವ ಜೊತೆಗೆ ಹಸಿರು ಇಂಧನದ ಉತ್ಪಾದನೆ, ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೀತಿ ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಇದರಿಂದ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅವಲಂಬನೆ ಪ್ರಮಾಣ ತಗ್ಗಿಸಲು ಕೂಡಾ ಸಭೆಯಲ್ಲಿ ವಿಚಾರ ವಿನಿಮಯ ನಡೆಯಿತು ಎಂದು ಮೂಲಗಳು<br />ತಿಳಿಸಿವೆ.</p>.<p>ಸಚಿವರಾಗಿ ಅಧಿಕಾರ ವಹಿಸಿಕೊಂಡ ಆರಂಭದ 100 ದಿನದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದರು. ಹಂತ ಹಂತವಾಗಿ ಇಂಧನ ಇಲಾಖೆಯಲ್ಲಿ ದಕ್ಷತೆ ಹೆಚ್ಚಿಸಿ ಪರಿಣಾಮಕಾರಿಯಾಗಿ ವಿದ್ಯುತ್ ನಿರ್ವಹಣೆಗೆ ಕ್ರಮ ವಹಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>