<p>ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್ಐಎ) ಕಚೇರಿಯನ್ನು ಮೇಲ್ದರ್ಜೆಗೆ ಏರಿಸಿ ಅದರ ವ್ಯಾಪ್ತಿಯನ್ನು ಹಿಗ್ಗಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿಮಂಗಳವಾರ ಭೇಟಿ ಮಾಡಿ ಸಮಾ ಲೋಚನೆ ನಡೆಸಿದ ಅವರು, ‘ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಯನ್ನು ತೀವ್ರಗೊಳಿಸಬೇಕು’ ಎಂದರು.</p>.<p>‘ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಲದಲ್ಲಿ ಹಿಂದೂ ಕಾರ್ಯಕರ್ತರನ್ನು ಒಂದೇ ಮಾದರಿಯಲ್ಲಿ ಕೊಲೆ ಮಾಡಲಾಗಿದೆ. ಕೇರಳ ಮಾದರಿಯಲ್ಲಿ ಕೊಲೆಗಳು ನಡೆಯುತ್ತಿವೆ. ಇದು ಕಳವಳಕಾರಿ’ ಎಂದು ಶೋಭಾ ಹೇಳಿದರು.</p>.<p>‘ಕೊಲೆ ಆರೋಪಿಗಳ ಹಿಂದೆ ಯಾರಿದ್ದಾರೆ, ಅವರಿಗೆ ಎಲ್ಲಿ ತರಬೇತಿ ನೀಡಲಾಗುತ್ತಿದೆ, ಈ ಕೃತ್ಯಗಳಿಗೆ ಹಣಕಾಸಿನ ನೆರವು ಎಲ್ಲಿಂದ ಸಿಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ತೀವ್ರಗತಿಯಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರನ್ನು ಒತ್ತಾಯಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್ಐಎ) ಕಚೇರಿಯನ್ನು ಮೇಲ್ದರ್ಜೆಗೆ ಏರಿಸಿ ಅದರ ವ್ಯಾಪ್ತಿಯನ್ನು ಹಿಗ್ಗಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿಮಂಗಳವಾರ ಭೇಟಿ ಮಾಡಿ ಸಮಾ ಲೋಚನೆ ನಡೆಸಿದ ಅವರು, ‘ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಯನ್ನು ತೀವ್ರಗೊಳಿಸಬೇಕು’ ಎಂದರು.</p>.<p>‘ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಲದಲ್ಲಿ ಹಿಂದೂ ಕಾರ್ಯಕರ್ತರನ್ನು ಒಂದೇ ಮಾದರಿಯಲ್ಲಿ ಕೊಲೆ ಮಾಡಲಾಗಿದೆ. ಕೇರಳ ಮಾದರಿಯಲ್ಲಿ ಕೊಲೆಗಳು ನಡೆಯುತ್ತಿವೆ. ಇದು ಕಳವಳಕಾರಿ’ ಎಂದು ಶೋಭಾ ಹೇಳಿದರು.</p>.<p>‘ಕೊಲೆ ಆರೋಪಿಗಳ ಹಿಂದೆ ಯಾರಿದ್ದಾರೆ, ಅವರಿಗೆ ಎಲ್ಲಿ ತರಬೇತಿ ನೀಡಲಾಗುತ್ತಿದೆ, ಈ ಕೃತ್ಯಗಳಿಗೆ ಹಣಕಾಸಿನ ನೆರವು ಎಲ್ಲಿಂದ ಸಿಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ತೀವ್ರಗತಿಯಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರನ್ನು ಒತ್ತಾಯಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>