<p><strong>ಹೊನ್ನಾಳಿ: </strong>‘ನನ್ನ ಬಳಿ ಇರುವುದು ಯಾವುದೋ ಕಾಮಗಾರಿಗಳಿಗೆ ಸಹಿ ಮಾಡಿಸಿದ ಪತ್ರವಲ್ಲ. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಆಗಿ ಮುಂದುವರಿಯುವಂತೆ 65ಕ್ಕೂ ಹೆಚ್ಚು ಶಾಸಕರು ಸಹಿ ಮಾಡಿದ ಪತ್ರ. ನನ್ನನ್ನು ಯಡಿಯೂರಪ್ಪನವರ ವಿರುದ್ಧ ಎತ್ತಿಕಟ್ಟಿದ್ದು ಮರೆತು ಹೋಯ್ತಾ’ ಎಂದು ಮುಖ್ಯಮಂತ್ರಿರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಸಚಿವ ಈಶ್ವರಪ್ಪ ವಿರುದ್ಧ ಹರಿಹಾಯ್ದರು.</p>.<p>ತಾಲ್ಲೂಕಿನ ಅರಬಗಟ್ಟೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನದು ಹುಲಿವೇಷ ಎಂದು ವಿನಾಕಾರಣ ನನ್ನ ಹೆಸರನ್ನು ತಂದು ಸಹಿ ಸಂಗ್ರಹದ ಕುರಿತು ಮಾತನಾಡಿದ್ದೀರಿ. ಚುನಾವಣಾ ಪೂರ್ವದಲ್ಲಿ ನೀವು ಏನು ಮಾಡಿದ್ದೀರಿ ಎಂದು ನನಗೆ ಗೊತ್ತಿದೆ. ನೀವು ರಾಜ್ಯಪಾಲರಿಗೆ ಪತ್ರ ಬರೆದಿದ್ದಿರಲ್ಲ, ಅದು ಯಾವ ಕಾರಣಕ್ಕಾಗಿ. ನಾವು ಏನಾದರೂ ಮಾತನಾಡಿದರೆ ವರಿಷ್ಠರು ಸಹಿಸೋಲ್ಲ ಎಂದು ಹೇಳಿದ್ದೀರಿ. ನಮಗೊಂದು ನ್ಯಾಯ, ನಿಮಗೊಂದು ನ್ಯಾಯವಾ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: </strong>‘ನನ್ನ ಬಳಿ ಇರುವುದು ಯಾವುದೋ ಕಾಮಗಾರಿಗಳಿಗೆ ಸಹಿ ಮಾಡಿಸಿದ ಪತ್ರವಲ್ಲ. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಆಗಿ ಮುಂದುವರಿಯುವಂತೆ 65ಕ್ಕೂ ಹೆಚ್ಚು ಶಾಸಕರು ಸಹಿ ಮಾಡಿದ ಪತ್ರ. ನನ್ನನ್ನು ಯಡಿಯೂರಪ್ಪನವರ ವಿರುದ್ಧ ಎತ್ತಿಕಟ್ಟಿದ್ದು ಮರೆತು ಹೋಯ್ತಾ’ ಎಂದು ಮುಖ್ಯಮಂತ್ರಿರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಸಚಿವ ಈಶ್ವರಪ್ಪ ವಿರುದ್ಧ ಹರಿಹಾಯ್ದರು.</p>.<p>ತಾಲ್ಲೂಕಿನ ಅರಬಗಟ್ಟೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನದು ಹುಲಿವೇಷ ಎಂದು ವಿನಾಕಾರಣ ನನ್ನ ಹೆಸರನ್ನು ತಂದು ಸಹಿ ಸಂಗ್ರಹದ ಕುರಿತು ಮಾತನಾಡಿದ್ದೀರಿ. ಚುನಾವಣಾ ಪೂರ್ವದಲ್ಲಿ ನೀವು ಏನು ಮಾಡಿದ್ದೀರಿ ಎಂದು ನನಗೆ ಗೊತ್ತಿದೆ. ನೀವು ರಾಜ್ಯಪಾಲರಿಗೆ ಪತ್ರ ಬರೆದಿದ್ದಿರಲ್ಲ, ಅದು ಯಾವ ಕಾರಣಕ್ಕಾಗಿ. ನಾವು ಏನಾದರೂ ಮಾತನಾಡಿದರೆ ವರಿಷ್ಠರು ಸಹಿಸೋಲ್ಲ ಎಂದು ಹೇಳಿದ್ದೀರಿ. ನಮಗೊಂದು ನ್ಯಾಯ, ನಿಮಗೊಂದು ನ್ಯಾಯವಾ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>