ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯಡಿಯೂರಪ್ಪ ವಿರುದ್ಧ ಎತ್ತಿಕಟ್ಟಿದ್ದು ಮರೆತುಹೋಯ್ತಾ?’–ರೇಣುಕಾಚಾರ್ಯ

ನನ್ನ ಬಳಿ ಇರುವುದು ಕಾಮಗಾರಿಗಳಿಗೆ ಸಹಿ ಮಾಡಿಸಿದ ಪತ್ರವಲ್ಲ
Last Updated 9 ಜೂನ್ 2021, 21:59 IST
ಅಕ್ಷರ ಗಾತ್ರ

ಹೊನ್ನಾಳಿ: ‘ನನ್ನ ಬಳಿ ಇರುವುದು ಯಾವುದೋ ಕಾಮಗಾರಿಗಳಿಗೆ ಸಹಿ ಮಾಡಿಸಿದ ಪತ್ರವಲ್ಲ. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಆಗಿ ಮುಂದುವರಿಯುವಂತೆ 65ಕ್ಕೂ ಹೆಚ್ಚು ಶಾಸಕರು ಸಹಿ ಮಾಡಿದ ಪತ್ರ. ನನ್ನನ್ನು ಯಡಿಯೂರಪ್ಪನವರ ವಿರುದ್ಧ ಎತ್ತಿಕಟ್ಟಿದ್ದು ಮರೆತು ಹೋಯ್ತಾ’ ಎಂದು ಮುಖ್ಯಮಂತ್ರಿರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಸಚಿವ ಈಶ್ವರಪ್ಪ ವಿರುದ್ಧ ಹರಿಹಾಯ್ದರು.

ತಾಲ್ಲೂಕಿನ ಅರಬಗಟ್ಟೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನದು ಹುಲಿವೇಷ ಎಂದು ವಿನಾಕಾರಣ ನನ್ನ ಹೆಸರನ್ನು ತಂದು ಸಹಿ ಸಂಗ್ರಹದ ಕುರಿತು ಮಾತನಾಡಿದ್ದೀರಿ. ಚುನಾವಣಾ ಪೂರ್ವದಲ್ಲಿ ನೀವು ಏನು ಮಾಡಿದ್ದೀರಿ ಎಂದು ನನಗೆ ಗೊತ್ತಿದೆ. ನೀವು ರಾಜ್ಯಪಾಲರಿಗೆ ಪತ್ರ ಬರೆದಿದ್ದಿರಲ್ಲ, ಅದು ಯಾವ ಕಾರಣಕ್ಕಾಗಿ. ನಾವು ಏನಾದರೂ ಮಾತನಾಡಿದರೆ ವರಿಷ್ಠರು ಸಹಿಸೋಲ್ಲ ಎಂದು ಹೇಳಿದ್ದೀರಿ. ನಮಗೊಂದು ನ್ಯಾಯ, ನಿಮಗೊಂದು ನ್ಯಾಯವಾ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT