ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ: ಸಿದ್ದರಾಮಯ್ಯ

ಬೆಂಗಳೂರು: ಗಣರಾಜ್ಯೋತ್ಸವದಂದು ನಡೆದ ರೈತರ ಟ್ರ್ಯಾಕ್ಟರ್ ಪೆರೇಡ್ ವೇಳೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ, ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು ಎಂದು ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ? 1/4
— Siddaramaiah (@siddaramaiah) January 27, 2021
ಮತ್ತೊಂದು ಟ್ವೀಟ್ನಲ್ಲಿ, ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದಿದ್ದಾರೆ.
ಇದನ್ನೂ ಓದಿ: ಪ್ರತಿಭಟನಾಕಾರರೊಂದಿಗಿದ್ದ ನಟ ದೀಪ್ ಸಿಧುರೊಂದಿಗೆ ಸಂಬಂಧವಿಲ್ಲ: ಸನ್ನಿ ಡಿಯೋಲ್
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ?. ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಎಂದು ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ ಎಂದು ದೂರಿದ್ದಾರೆ.
ಇದನ್ನೂ ಓದಿ: Photos | ರೈತರ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ ನಂತರದ ದೃಶ್ಯಗಳು...
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.