ಈ ಕುರಿತಂತೆಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸೋಮವಾರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರಿಗೆ ಅರ್ಜಿ ಸಲ್ಲಿಸಿ, ‘ಈ ಅರ್ಜಿಯಲ್ಲಿ ಕಾಣಿಸಲಾಗಿರುವ ಆರೋಪಿಗಳು, ನ್ಯಾಯಾಂಗ ಮತ್ತು ತೀರ್ಪನ್ನು ಟೀಕಿಸುತ್ತ ವೈಯಕ್ತಿಕ ಹೇಳಿಕೆ ನೀಡುತ್ತಿದ್ದಾರೆ. ನ್ಯಾಯಮೂರ್ತಿಗಳ ವಿಶ್ವಾಸಾರ್ಹತೆಯನ್ನೂ ಪ್ರಶ್ನಿಸುತ್ತಿದ್ದಾರೆ. ಈ ಮೂಲಕ ನ್ಯಾಯಾಂಗದ ಘನತೆಯನ್ನು ಕುಗ್ಗಿಸುವ ಯತ್ನ ಮಾಡುತ್ತಿದ್ದಾರೆ‘ ಎಂದು ವಿವರಿಸಿದರು.