<p><strong>ಬೆಂಗಳೂರು: </strong>ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ – ಬಿಎಂಟಿಸಿ ಬಸ್ಗಳಿಗೆ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ.</p>.<p>‘ಸಾರಿಗೆ ಸಂಸ್ಥೆ ಬಸ್ಗಳು ಎಂದಿನಂತೆ ಸಂಚರಿಸಲಿವೆ. ಬಸ್ ಮತ್ತು ಸಂಸ್ಥೆಯ ಆಸ್ತಿಗೆ ಯಾವುದೇ ಹಾನಿಯಾಗದಂತೆ ಭದ್ರತೆ ಒದಗಿಸಬೇಕು’ ಎಂದು ಪೊಲೀಸ್ ಇಲಾಖೆಯನ್ನು ಕೋರಲಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/farmer-unions-call-for-bharat-bandh-on-27-september-against-farm-laws-870022.html" target="_blank">ಕೃಷಿ ಕಾಯ್ದೆ ತಿದ್ದುಪಡಿಗೆ ವಿರೋಧ; ಭಾರತ್ ಬಂದ್ ಯಶಸ್ಸಿಗೆ ರೈತರು ಸಜ್ಜು</a></strong></p>.<p>‘ಬಿಎಂಟಿಸಿ ಬಸ್ಗಳ ಸಂಚಾರದಲ್ಲಿ ವ್ಯತ್ಯಾಸ ಆಗುವುದಿಲ್ಲ. ಭದ್ರತೆ ಕೋರಿ ಪತ್ರ ಬರೆಯಲಾಗಿದೆ’ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದರು.</p>.<p>‘ಮೆಟ್ರೊ ರೈಲು ಸಂಚಾರವೂ ಎಂದಿನಂತೆ ಇರಲಿದೆ. ಹೆಚ್ಚಿನ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಯನ್ನು ಕೋರಲಿದ್ದೇವೆ’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cm-basavaraj-bommai-reaction-about-bharat-bandh-on-27-september-870050.html" target="_blank">ಸಂಕಷ್ಟದ ಸಮಯದಲ್ಲಿ ಭಾರತ್ ಬಂದ್ಗೆ ಕರೆ ನೀಡಿರುವುದು ಸರಿಯಲ್ಲ: ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ – ಬಿಎಂಟಿಸಿ ಬಸ್ಗಳಿಗೆ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ.</p>.<p>‘ಸಾರಿಗೆ ಸಂಸ್ಥೆ ಬಸ್ಗಳು ಎಂದಿನಂತೆ ಸಂಚರಿಸಲಿವೆ. ಬಸ್ ಮತ್ತು ಸಂಸ್ಥೆಯ ಆಸ್ತಿಗೆ ಯಾವುದೇ ಹಾನಿಯಾಗದಂತೆ ಭದ್ರತೆ ಒದಗಿಸಬೇಕು’ ಎಂದು ಪೊಲೀಸ್ ಇಲಾಖೆಯನ್ನು ಕೋರಲಾಗಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/farmer-unions-call-for-bharat-bandh-on-27-september-against-farm-laws-870022.html" target="_blank">ಕೃಷಿ ಕಾಯ್ದೆ ತಿದ್ದುಪಡಿಗೆ ವಿರೋಧ; ಭಾರತ್ ಬಂದ್ ಯಶಸ್ಸಿಗೆ ರೈತರು ಸಜ್ಜು</a></strong></p>.<p>‘ಬಿಎಂಟಿಸಿ ಬಸ್ಗಳ ಸಂಚಾರದಲ್ಲಿ ವ್ಯತ್ಯಾಸ ಆಗುವುದಿಲ್ಲ. ಭದ್ರತೆ ಕೋರಿ ಪತ್ರ ಬರೆಯಲಾಗಿದೆ’ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದರು.</p>.<p>‘ಮೆಟ್ರೊ ರೈಲು ಸಂಚಾರವೂ ಎಂದಿನಂತೆ ಇರಲಿದೆ. ಹೆಚ್ಚಿನ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಯನ್ನು ಕೋರಲಿದ್ದೇವೆ’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cm-basavaraj-bommai-reaction-about-bharat-bandh-on-27-september-870050.html" target="_blank">ಸಂಕಷ್ಟದ ಸಮಯದಲ್ಲಿ ಭಾರತ್ ಬಂದ್ಗೆ ಕರೆ ನೀಡಿರುವುದು ಸರಿಯಲ್ಲ: ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>