‘ಕಾಡುಗೊಲ್ಲರು, ಕಾಡುಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನಕ್ಕೆ ಸರ್ಕಾರ ಪೂರಕವಾಗಿ ನಡೆದುಕೊಳ್ಳುತ್ತಿಲ್ಲ. ವಾಲ್ಮೀಕಿ, ತಳವಾರ, ಪರಿವಾರ ಸಮುದಾಯದ ವಿಚಾರದಲ್ಲಿಯೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸೂಚನೆ ಸಿಕ್ಕಿದೆ. ಆಗ ಖಂಡಿತ ಸಮುದಾಯದ ಪರವಾಗಿ ಕೆಲಸ ಮಾಡುತ್ತೇನೆ’ ಎಂದು ಆಶ್ವಾಸನೆ ನೀಡಿದರು.