‘ಈಗ ನಡೆಯುತ್ತಿರುವ ಮೀಸಲಾತಿ ಹೋರಾಟದ ಹಿಂದೆ ಆರ್ಎಸ್ಎಸ್ ಕೈವಾಡ ಇರುವುದರಿಂದಲೇ ನಾನು ವಿರೋಧಿಸುತ್ತಿದ್ದೇನೆ. ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ರಾಜ್ಯದಲ್ಲಿ ಕುಲಶಾಸ್ತ್ರ ಅಧ್ಯಯನ ಆರಂಭಿಸಿ ಒಂದು ವರ್ಷವಾದರೂ ಏಕೆ ಪೂರ್ಣವಾಗುತ್ತಿಲ್ಲ. ಈ ಹೋರಾಟದ ಮೂಲಕ ಕುರುಬ ಸಮಾಜ ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದ ಮುಖಂಡರಾಗಬೇಕು ಎನ್ನುವ ಸಚಿವ ಈಶ್ವರಪ್ಪ ಕನಸು ಈಡೇರಿವುದಿಲ್ಲ’ ಎಂದು ಹೇಳಿದರು.