<p><strong>ರಾಯಚೂರು:</strong> ‘ರಾಜ್ಯ ಮತ್ತು ಕೇಂದ್ರದಲ್ಲಿ ಅವರದ್ದೆ ಬಿಜೆಪಿ ಸರ್ಕಾರ ಇದ್ದರೂ ಕುರುಬರಿಗೆ ಪರಿಶಿಷ್ಟ ಜಾತಿ ಮೀಸಲಾತಿ ಕೊಡಿಸಲು ಸಚಿವ ಈಶ್ವರಪ್ಪ ಹೋರಾಟ ಮಾಡುತ್ತೀರುವುದೇಕೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಿಣಿ ಬ್ರಿಡ್ಜ್ ಕನಕಗುರು ಪೀಠದಲ್ಲಿ ಮಂಗಳವಾರದಿಂದ ಆರಂಭವಾದ ಹಾಲುಮತ ಸಂಸ್ಕೃತ ವೈಭವ ಉತ್ಸವ ಉದ್ಘಾಟಿಸುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಈ ಹೋರಾಟ ಈಶ್ವರಪ್ಪ ವರ್ಸಸ್ ಯಡಿಯೂರಪ್ಪ ನಡೆಯುತ್ತಿದೆಯೇ? ಸರ್ಕಾರದ ಮೇಲೆ ಒತ್ತಡ ಹೇರಿ ಮೀಸಲಾತಿ ಕೊಡಿಸುವುದಕ್ಕೆ ಆಗುವುದಿಲ್ಲವೆ? ನಾನು ಮುಖ್ಯಮಂತ್ರಿಯಾಗಿದ್ದಾಗ ನಾಲ್ಕು ಜಿಲ್ಲೆಗಳಲ್ಲಿ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಿದ್ದೇನೆ’ ಎಂದರು.</p>.<p>‘ಈಗ ನಡೆಯುತ್ತಿರುವ ಮೀಸಲಾತಿ ಹೋರಾಟದ ಹಿಂದೆ ಆರ್ಎಸ್ಎಸ್ ಕೈವಾಡ ಇರುವುದರಿಂದಲೇ ನಾನು ವಿರೋಧಿಸುತ್ತಿದ್ದೇನೆ. ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ರಾಜ್ಯದಲ್ಲಿ ಕುಲಶಾಸ್ತ್ರ ಅಧ್ಯಯನ ಆರಂಭಿಸಿ ಒಂದು ವರ್ಷವಾದರೂ ಏಕೆ ಪೂರ್ಣವಾಗುತ್ತಿಲ್ಲ. ಈ ಹೋರಾಟದ ಮೂಲಕ ಕುರುಬ ಸಮಾಜ ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದ ಮುಖಂಡರಾಗಬೇಕು ಎನ್ನುವ ಸಚಿವ ಈಶ್ವರಪ್ಪ ಕನಸು ಈಡೇರಿವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ರಾಜ್ಯ ಮತ್ತು ಕೇಂದ್ರದಲ್ಲಿ ಅವರದ್ದೆ ಬಿಜೆಪಿ ಸರ್ಕಾರ ಇದ್ದರೂ ಕುರುಬರಿಗೆ ಪರಿಶಿಷ್ಟ ಜಾತಿ ಮೀಸಲಾತಿ ಕೊಡಿಸಲು ಸಚಿವ ಈಶ್ವರಪ್ಪ ಹೋರಾಟ ಮಾಡುತ್ತೀರುವುದೇಕೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.</p>.<p>ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಿಣಿ ಬ್ರಿಡ್ಜ್ ಕನಕಗುರು ಪೀಠದಲ್ಲಿ ಮಂಗಳವಾರದಿಂದ ಆರಂಭವಾದ ಹಾಲುಮತ ಸಂಸ್ಕೃತ ವೈಭವ ಉತ್ಸವ ಉದ್ಘಾಟಿಸುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಈ ಹೋರಾಟ ಈಶ್ವರಪ್ಪ ವರ್ಸಸ್ ಯಡಿಯೂರಪ್ಪ ನಡೆಯುತ್ತಿದೆಯೇ? ಸರ್ಕಾರದ ಮೇಲೆ ಒತ್ತಡ ಹೇರಿ ಮೀಸಲಾತಿ ಕೊಡಿಸುವುದಕ್ಕೆ ಆಗುವುದಿಲ್ಲವೆ? ನಾನು ಮುಖ್ಯಮಂತ್ರಿಯಾಗಿದ್ದಾಗ ನಾಲ್ಕು ಜಿಲ್ಲೆಗಳಲ್ಲಿ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಿದ್ದೇನೆ’ ಎಂದರು.</p>.<p>‘ಈಗ ನಡೆಯುತ್ತಿರುವ ಮೀಸಲಾತಿ ಹೋರಾಟದ ಹಿಂದೆ ಆರ್ಎಸ್ಎಸ್ ಕೈವಾಡ ಇರುವುದರಿಂದಲೇ ನಾನು ವಿರೋಧಿಸುತ್ತಿದ್ದೇನೆ. ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ರಾಜ್ಯದಲ್ಲಿ ಕುಲಶಾಸ್ತ್ರ ಅಧ್ಯಯನ ಆರಂಭಿಸಿ ಒಂದು ವರ್ಷವಾದರೂ ಏಕೆ ಪೂರ್ಣವಾಗುತ್ತಿಲ್ಲ. ಈ ಹೋರಾಟದ ಮೂಲಕ ಕುರುಬ ಸಮಾಜ ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದ ಮುಖಂಡರಾಗಬೇಕು ಎನ್ನುವ ಸಚಿವ ಈಶ್ವರಪ್ಪ ಕನಸು ಈಡೇರಿವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>