<p><strong>ಬೆಂಗಳೂರು:</strong> ‘ಕಾಲೇಜಿನ ಒಂದು ವಿಷಯಕ್ಕೆ ಬೋಧಕ ಸಿಬ್ಬಂದಿ ಹುದ್ದೆಒಂದೇ ಇದ್ದರೆ ಅದನ್ನು ಪರಿಶಿಷ್ಟ ಜಾತಿ ಅಥವಾ ಪಂಗಡದ ಅಭ್ಯರ್ಥಿಗೆ ಮೀಸಲಿಡಲಾಗದು’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>2007ರ ಸೆಪ್ಟೆಂಬರ್ನಿಂದ ಮಂಡ್ಯದ ಅನುದಾನಿತ ಪಿಯು ಕಾಲೇಜಿನ ಗಣಿತ ಉಪನ್ಯಾಸಕಿ ಎಂ.ಎಸ್. ರಶ್ಮಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ‘ಇರುವ ಒಂದೇ ಹುದ್ದೆಯನ್ನು ಮೀಸಲಿರುವುದು ಕಾನೂನಿಗೆ ವಿರುದ್ಧ’ ಎಂದು ವಾದಿಸಿದ್ದಾರೆ.</p>.<p>‘ಗಣಿತ ವಿಷಯದ ಹುದ್ದೆಯನ್ನು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಿ 2019ರ ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಡಿಸಲಾಗಿದೆ. ಒಂದೇ ಹುದ್ದೆಯನ್ನು ನಿರ್ದಿಷ್ಟ ಜಾತಿಗೆ ಮೀಸಲಿರಿಸಿದರೆ, ಅದು ಶೇ 100ರಷ್ಟು ಮೀಸಲಾತಿ ನಿಗದಿ ಮಾಡಿದಂತೆ ಆಗಲಿದೆ’ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಒಂದೇ ಹುದ್ದೆ ಇದ್ದಾಗ ಅದನ್ನು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲು ಆಗದು ಎಂಬುದಕ್ಕೆಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶಗಳಿವೆ ಎಂದು ಉಲ್ಲೇಖಿಸಿತು.</p>.<p>‘ನೇಮಕಾತಿ ಪ್ರಕ್ರಿಯೆಗೆ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು’ ಎಂದು ತಿಳಿಸಿದ ಪೀಠ, ‘ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಅರ್ಜಿದಾರರ ಸೇವೆಗೆ ತೊಂದರೆ ಆಗಬಾರದು’ ಎಂದು ಕಾಲೇಜಿಗೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾಲೇಜಿನ ಒಂದು ವಿಷಯಕ್ಕೆ ಬೋಧಕ ಸಿಬ್ಬಂದಿ ಹುದ್ದೆಒಂದೇ ಇದ್ದರೆ ಅದನ್ನು ಪರಿಶಿಷ್ಟ ಜಾತಿ ಅಥವಾ ಪಂಗಡದ ಅಭ್ಯರ್ಥಿಗೆ ಮೀಸಲಿಡಲಾಗದು’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>2007ರ ಸೆಪ್ಟೆಂಬರ್ನಿಂದ ಮಂಡ್ಯದ ಅನುದಾನಿತ ಪಿಯು ಕಾಲೇಜಿನ ಗಣಿತ ಉಪನ್ಯಾಸಕಿ ಎಂ.ಎಸ್. ರಶ್ಮಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ‘ಇರುವ ಒಂದೇ ಹುದ್ದೆಯನ್ನು ಮೀಸಲಿರುವುದು ಕಾನೂನಿಗೆ ವಿರುದ್ಧ’ ಎಂದು ವಾದಿಸಿದ್ದಾರೆ.</p>.<p>‘ಗಣಿತ ವಿಷಯದ ಹುದ್ದೆಯನ್ನು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಿ 2019ರ ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಡಿಸಲಾಗಿದೆ. ಒಂದೇ ಹುದ್ದೆಯನ್ನು ನಿರ್ದಿಷ್ಟ ಜಾತಿಗೆ ಮೀಸಲಿರಿಸಿದರೆ, ಅದು ಶೇ 100ರಷ್ಟು ಮೀಸಲಾತಿ ನಿಗದಿ ಮಾಡಿದಂತೆ ಆಗಲಿದೆ’ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಒಂದೇ ಹುದ್ದೆ ಇದ್ದಾಗ ಅದನ್ನು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲು ಆಗದು ಎಂಬುದಕ್ಕೆಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶಗಳಿವೆ ಎಂದು ಉಲ್ಲೇಖಿಸಿತು.</p>.<p>‘ನೇಮಕಾತಿ ಪ್ರಕ್ರಿಯೆಗೆ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು’ ಎಂದು ತಿಳಿಸಿದ ಪೀಠ, ‘ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಅರ್ಜಿದಾರರ ಸೇವೆಗೆ ತೊಂದರೆ ಆಗಬಾರದು’ ಎಂದು ಕಾಲೇಜಿಗೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>