<p>ಬೆಂಗಳೂರು: ‘ಜನಬಲದ ಆಧಾರದ ಮೇಲೆ ಪ್ರಬಲ ಜಾತಿಗಳನ್ನು ಪ್ರವರ್ಗ 1ಮತ್ತು ಪ್ರವರ್ಗ 2 (ಎ) ಪಟ್ಟಿಗೆಸೇರಿ ದರೆ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗುತ್ತದೆ’ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಳವಳವ್ಯಕ್ತಪಡಿಸಿದೆ.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್, ‘ಸಂವಿಧಾನದ ಅಡಿ ಮೀಸಲಾತಿ ನೀಡಲು ಶೈಕ್ಷಣಿಕ ಮತ್ತು ಸಾಮಾಜಿಕ ಹಿನ್ನೆಲೆಯನ್ನು ಮಾನದಂಡವಾಗಿ ಪರಿಗಣಿಸಲಾಗಿದೆ. ಸರ್ಕಾರ ಅವೈಜ್ಞಾನಿಕವಾಗಿ ಪ್ರಬಲ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದರೆ, ಹಿಂದುಳಿದ ಸಮುದಾಯಗಳ ಪಾಲು</p>.<p>ಬಲಿಷ್ಠರ ಪಾಲಾಗುತ್ತದೆ. ಪ್ರಸ್ತುತ ಪ್ರವರ್ಗ 2 (ಎ)ರಲ್ಲಿ102 ಜಾತಿಗಳು ಇದ್ದು, ಶೇ 15ರಷ್ಟು ಮೀಸಲಾತಿ ನೀಡಲಾಗಿದೆ. 2 (ಎ) ಪ್ರವರ್ಗದಲ್ಲಿರುವ ಅನೇಕ ಸಮುದಾಯದ ಜನರು ಕುಶಲಕರ್ಮಿಗಳು ಮತ್ತು ಭೂಹೀನರು. ಇವರುಕುಲಕಸಬುಗಳನ್ನು ನಂಬಿರುವವರು. ಇವರಿಗೆ ಇಲ್ಲಿಯವರೆಗೆ ಒಮ್ಮೆಯೂ ಮೀಸಲಾತಿ ಸೌಲಭ್ಯ ದೊರೆತಿಲ್ಲ. ಆದ್ದರಿಂದ ದುರ್ಬಲ ಮತ್ತು ಅಸಹಾಯಕ ಸಮುದಾಯಗಳನ್ನು ರಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು’ ಎಂದು ಹೇಳಿದರು.</p>.<p>‘ಪ್ರಬಲರ ಒತ್ತಾಯಕ್ಕೆ ಮಣಿದು, ಮೀಸಲಾತಿ ನೀಡಿದರೆ ಪ್ರವರ್ಗ 1 ಮತ್ತು ಪ್ರವರ್ಗ 2 (ಎ) ಪಟ್ಟಿಯಲ್ಲಿರುವ ಎಲ್ಲ 197 ಜಾತಿಗಳು ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ಮಾಡಲಿವೆ. ಅವಶ್ಯಕತೆ ಬಿದ್ದರೆ ಕಾನೂನು ಹೋರಾಟವನ್ನೂ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಜನಬಲದ ಆಧಾರದ ಮೇಲೆ ಪ್ರಬಲ ಜಾತಿಗಳನ್ನು ಪ್ರವರ್ಗ 1ಮತ್ತು ಪ್ರವರ್ಗ 2 (ಎ) ಪಟ್ಟಿಗೆಸೇರಿ ದರೆ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗುತ್ತದೆ’ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಕಳವಳವ್ಯಕ್ತಪಡಿಸಿದೆ.</p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್, ‘ಸಂವಿಧಾನದ ಅಡಿ ಮೀಸಲಾತಿ ನೀಡಲು ಶೈಕ್ಷಣಿಕ ಮತ್ತು ಸಾಮಾಜಿಕ ಹಿನ್ನೆಲೆಯನ್ನು ಮಾನದಂಡವಾಗಿ ಪರಿಗಣಿಸಲಾಗಿದೆ. ಸರ್ಕಾರ ಅವೈಜ್ಞಾನಿಕವಾಗಿ ಪ್ರಬಲ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದರೆ, ಹಿಂದುಳಿದ ಸಮುದಾಯಗಳ ಪಾಲು</p>.<p>ಬಲಿಷ್ಠರ ಪಾಲಾಗುತ್ತದೆ. ಪ್ರಸ್ತುತ ಪ್ರವರ್ಗ 2 (ಎ)ರಲ್ಲಿ102 ಜಾತಿಗಳು ಇದ್ದು, ಶೇ 15ರಷ್ಟು ಮೀಸಲಾತಿ ನೀಡಲಾಗಿದೆ. 2 (ಎ) ಪ್ರವರ್ಗದಲ್ಲಿರುವ ಅನೇಕ ಸಮುದಾಯದ ಜನರು ಕುಶಲಕರ್ಮಿಗಳು ಮತ್ತು ಭೂಹೀನರು. ಇವರುಕುಲಕಸಬುಗಳನ್ನು ನಂಬಿರುವವರು. ಇವರಿಗೆ ಇಲ್ಲಿಯವರೆಗೆ ಒಮ್ಮೆಯೂ ಮೀಸಲಾತಿ ಸೌಲಭ್ಯ ದೊರೆತಿಲ್ಲ. ಆದ್ದರಿಂದ ದುರ್ಬಲ ಮತ್ತು ಅಸಹಾಯಕ ಸಮುದಾಯಗಳನ್ನು ರಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು’ ಎಂದು ಹೇಳಿದರು.</p>.<p>‘ಪ್ರಬಲರ ಒತ್ತಾಯಕ್ಕೆ ಮಣಿದು, ಮೀಸಲಾತಿ ನೀಡಿದರೆ ಪ್ರವರ್ಗ 1 ಮತ್ತು ಪ್ರವರ್ಗ 2 (ಎ) ಪಟ್ಟಿಯಲ್ಲಿರುವ ಎಲ್ಲ 197 ಜಾತಿಗಳು ರಾಜ್ಯದಾದ್ಯಂತ ಬೀದಿಗಿಳಿದು ಹೋರಾಟ ಮಾಡಲಿವೆ. ಅವಶ್ಯಕತೆ ಬಿದ್ದರೆ ಕಾನೂನು ಹೋರಾಟವನ್ನೂ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>