ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಳ ಆಗದಂತೆ ಪ್ರಯತ್ನಿಸಿದವರೂ ಇದ್ದರು. ಆದರೆ, ನಮ್ಮ ಮುಖ್ಯಮಂತ್ರಿ ಚಾಣಕ್ಯರು, ಚಾಣಕ್ಯ ವಿದ್ಯೆ ಪ್ರಯೋಗ ಮಾಡಿ, ಮೀಸಲಾತಿ ಹೆಚ್ಚಳದ ದೃಢ ನಿರ್ಧಾರ ತೆಗೆದುಕೊಂಡು ಸುಗ್ರೀವಾಜ್ಞೆ ಯನ್ನೂ ಹೊರಡಿಸಿದರು’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.