ಪರಿಶಿಷ್ಟ ಜಾತಿ/ಪಂಗಡದವರ ಮೀಸಲಾತಿಯನ್ನು ಹೆಚ್ಚಿಸಬೇಕಾದರೆ ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತರಬೇಕಿದೆ. ಅದು ಆಗುವುದಕ್ಕೆ ಮುನ್ನ ರಾಜ್ಯ ಸರ್ಕಾರ ತಂದಿರುವ ಸುಗ್ರೀವಾಜ್ಞೆ, ಈ ಮಸೂದೆಗೆ ಕಾನೂನು ತೊಡಕುಗಳಿವೆ. ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದೇವೆ ಎಂದು ಜನರನ್ನು ತಪ್ಪುದಾರಿಗೆ ಎಳೆಯಲು ಮುಂದಾಗಿದ್ದೀರಿ. ಚುನಾವಣೆ ಹೊತ್ತಿನಲ್ಲಿ ದಲಿತ ರಾಜಕಾರಣಕ್ಕೆ ಕೈ ಹಾಕಿ, ಮತ ಸೆಳೆಯುವ ಹುನ್ನಾರ. ಪರಿಶಿಷ್ಟರ ಮತಗಳನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದ್ದೀರಿ ಎಂದು ಹರಿಪ್ರಸಾದ್ ದೂರಿದರು.