ಶಿಕಾರಿಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಒಳಮೀಸಲಾತಿ ಮೂಲಕ ಎಲ್ಲರಿಗೂ ನ್ಯಾಯ ಒದಗಿಸುವ ವಿಶೇಷ ಪ್ರಯತ್ನ ಸರ್ಕಾರ ಮಾಡಿದೆ. ಅನಗತ್ಯ ವದಂತಿಗಳಿಂದ ಯಾರೂ ಕೂಡ ಪ್ರಚೋದಿತರಾಗಬಾರದು. ಇದು ಎಲ್ಲರಿಗೂ ಲಾಭವಾಗುವಂತಹ ಯೋಜನೆ. ವೈಜ್ಞಾನಿಕವಾಗಿ ಮೀಸಲಾತಿ ಕೊಡುವ ಪ್ರಯತ್ನ ನಡೆದಿದೆ. ಇದನ್ನು ಎಲ್ಲ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು‘ ಎಂದರು.