‘2017ರ ಕಾಯ್ದೆಯನ್ನು ಜಾರಿಗೆ ತರಲು 2019 ರ ಜೂನ್ 24 ರಂದು ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ಕೆಲವು ಅಸ್ಪಷ್ಟತೆಗಳಿವೆ. ಹೆಚ್ಚಿನ ಗೊಂದಲಗಳನ್ನು ತಪ್ಪಿಸಲು ಈ ಆದೇಶವನ್ನು ಹಿಂಪಡೆಯುವುದು ಸೂಕ್ತ ಮತ್ತು ಹೊಸ ಮಾರ್ಗಸೂಚಿ ಜಾರಿಗೊಳಿಸಿರುವುದೇ ಸರಿಯಾದ ದಾರಿ. ಇದರಿಂದಾಗಿ ಕಾಯ್ದೆ ಅನುಷ್ಠಾನದಲ್ಲಿ ಆಗಬಹುದಾದ ಗೊಂದಲಗಳು ನಿವಾರಣೆಯಾಗುತ್ತದೆ. ಸರ್ಕಾರಿ ಅಧಿಕಾರಿಗಳ ಕಾರ್ಯನಿರ್ವಹಣೆಯ ಮೇಲೂ ಪರಿ ಣಾಮ ಬೀರುತ್ತದೆ. ಅನಗತ್ಯ ವಾಜ್ಯಗಳಿಗೆ ಆಸ್ಪದ ನೀಡುವುದೂ ತಪ್ಪುತ್ತದೆ’ ಎಂದು ತಿಳಿಸಿದೆ. ‘ಹೊಸ ಮಾರ್ಗಸೂಚಿಗಳನ್ನು ರೂಪಿಸುವಾಗ ಸುಪ್ರೀಂ ಕೋರ್ಟ್ನ ಎಲ್ಲಾ ತೀರ್ಪುಗಳನ್ನು ಗಮನದಲ್ಲಿ ಇರಿಸಿಕೊಂಡಿರಬೇಕು. ಬಡ್ತಿಯಲ್ಲಿನ ಬ್ಯಾಕ್ ಲಾಗ್ ಖಾಲಿ ಹುದ್ದೆಗಳ ಭರ್ತಿ, ನಂತರದ ಮೀಸಲು, ಮೀಸಲಾತಿ ವರ್ಗದವರು ಸಾಮಾನ್ಯವಾಗಿ ಅರ್ಹರಾಗಿರುತ್ತಾರೆಂಬ ಸಮಸ್ಯೆ ನಿವಾರಣೆ, ಅರ್ಹತೆ ಮತ್ತು ಇತರ ಸಂಬಂಧಿತ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕಾಗಿದೆ’ ಎಂದು ಆದೇಶದಲ್ಲಿ ವಿವರಿಸಿದೆ.