<p><strong>ಬೆಂಗಳೂರು: </strong>ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ತಿಂಗಳಲ್ಲಿ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಚುನಾವಣಾ ಆಯೋಗ (ಎಸ್ಇಸಿ) ನೀಡಿದ ವಸ್ತುಸ್ಥಿತಿ ವರದಿ ಪರಿಶೀಲಿಸಿತು.</p>.<p>‘ಹಲವು ಸ್ಥಳೀಯ ಸಂಸ್ಥೆಗಳ ಅವಧಿ 2021ರ ಜೂನ್ನಲ್ಲೇ ಮುಕ್ತಾಯವಾಗಿದೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ– ಧಾರವಾಡ ಪಾಲಿಕೆಗಳಿಗೆ ಸೆ.6ರಂದು ಯಶಸ್ವಿಯಾಗಿ ಚುನಾವಣೆ ನಡೆಸಲಾಗಿದೆ. ಮೀಸಲಾತಿ ಪಟ್ಟಿ ಇಲ್ಲದೆಉಳಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಪ್ರಕ್ರಿಯೆ ಆರಂಭಿಸಲು ಆಗುತ್ತಿಲ್ಲ’ ಎಂದು ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ವಿವರಿಸಿದರು.</p>.<p>ಮೀಸಲಾತಿ ಪಟ್ಟಿಯನ್ನು ಕೂಡಲೇ ಪ್ರಕಟಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ನ.17ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ತಿಂಗಳಲ್ಲಿ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಚುನಾವಣಾ ಆಯೋಗ (ಎಸ್ಇಸಿ) ನೀಡಿದ ವಸ್ತುಸ್ಥಿತಿ ವರದಿ ಪರಿಶೀಲಿಸಿತು.</p>.<p>‘ಹಲವು ಸ್ಥಳೀಯ ಸಂಸ್ಥೆಗಳ ಅವಧಿ 2021ರ ಜೂನ್ನಲ್ಲೇ ಮುಕ್ತಾಯವಾಗಿದೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ– ಧಾರವಾಡ ಪಾಲಿಕೆಗಳಿಗೆ ಸೆ.6ರಂದು ಯಶಸ್ವಿಯಾಗಿ ಚುನಾವಣೆ ನಡೆಸಲಾಗಿದೆ. ಮೀಸಲಾತಿ ಪಟ್ಟಿ ಇಲ್ಲದೆಉಳಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಪ್ರಕ್ರಿಯೆ ಆರಂಭಿಸಲು ಆಗುತ್ತಿಲ್ಲ’ ಎಂದು ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ವಿವರಿಸಿದರು.</p>.<p>ಮೀಸಲಾತಿ ಪಟ್ಟಿಯನ್ನು ಕೂಡಲೇ ಪ್ರಕಟಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ನ.17ಕ್ಕೆ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>