ಇಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ‘ಮೀಸಲಾತಿ ಪರಿಷ್ಕರಣೆ ವಿಚಾರದಲ್ಲಿ ಯಾವರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸ್ಪಷ್ಟ ನೀತಿಯನ್ನು ರೂಪಿಸಿತ್ತು. ಅದೇ ಮಾದರಿಯ ವ್ಯವಸ್ಥೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೂಡಾ ಆದೇಶ ಮಾಡಿದೆ. ಮೀಸಲಾತಿಯ ಕುರಿತು ಸಚಿವ ಸಂಪುಟ ನಿರ್ಧಾರ ಕೈಗೊಳ್ಳಲು ಅವಕಾಶವಿಲ್ಲ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಆಧರಿಸಿ ಕೇಂದ್ರದ ಅಥವಾ ರಾಜ್ಯದ ಶಾಶ್ವತ ಆಯೋಗಗಳೇ ಈ ಬಗ್ಗೆ ನಿರ್ಧಾರ ತಳೆಯಬೇಕು’ ಎಂದರು.