‘ಕೋವಿಡ್ ಎರಡನೇ ಅಲೆಯಿಂದಾಗಿ ಹಲವಾರು ಜನರು ಸಮಸ್ಯೆ ಎದುರಿಸಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು ಭರ್ತಿಯಾಗಿದ್ದರಿಂದ ರೋಗಿಗಳಿಗೆ ಚಿಕಿತ್ಸೆ ಒದಗಿಸುವುದು ವೈದ್ಯರಿಗೂ ಸವಾಲಾಗಿತ್ತು. ಈ ಅವಧಿಯಲ್ಲಿ ಸೋಂಕಿತರನ್ನು ಉಳಿಸಿಕೊಳ್ಳಲು ನಮ್ಮ ವೈದ್ಯರು ಹಗಲಿರುಳು ಶ್ರಮಿಸಿದ್ದಾರೆ. ನಮ್ಮ ಸೇವೆಗೆ ಸರ್ಕಾರವುಕೋವಿಡ್ ಅಪಾಯ ಭತ್ಯೆ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಂಘದ ಅಧ್ಯಕ್ಷೆ ಡಾ. ನಮ್ರತಾ ಸಿ. ಬೇಸರ ವ್ಯಕ್ತಪಡಿಸಿದ್ದಾರೆ.