ಬೆಂಗಳೂರು: ‘ಪ್ರತಿದಿನ ನಿಮ್ಮ ಸರ್ಕಾರದ ವಿರುದ್ದ ಹಲವು ಆರೋಪಗಳು ಕೇಳಿಬರುತ್ತಲೇ ಇವೆ. ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ, ದಯಮಾಡಿ ರಾಜೀನಾಮೆ ನೀಡಿ, ರಾಜ್ಯದ ಮಾನ ಉಳಿಸಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.