ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಸಿಗೆ ನೀರುಣಿಸಿ ಸಮಾವೇಶ ಉದ್ಘಾಟಿಸಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕರ್ನಾಟಕದ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಸೋಮಶೇಖರ್, ಶಶಿಕಲಾ ಜೊಲ್ಲೆ, ಶಂಕರ ಪಾಟೀಲ ಮನೇನಕೊಪ್ಪ, ಶಾಸಕರಾದ ಶ್ರೀಮಂತ ಪಾಟೀಲ, ಕೆ.ಎಸ್.ಈಶ್ವರಪ್ಪ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಹಾರಾಷ್ಟ್ರದ ಶಿಕ್ಷಣ ಸಚಿವ ಚಂದ್ರಕಾಂತ ಪಾಟೀಲ ಸೇರಿದಂತೆ ದೇಶದ ವಿವಿಧ ಮಠಗಳ 500ಕ್ಕೂ ಹೆಚ್ಚು ಶ್ರೀಗಳು, ಸಂತರು ಪಾಲ್ಗೊಂಡರು.