‘ರಾಜ್ಯದ ಗಡಿಭಾಗದಲ್ಲಿರುವ ಹೊಗೆನಕಲ್ ಜಲಪಾತಕ್ಕೆ ತಮಿಳುನಾಡಿನಿಂದಲೂ ಪ್ರವಾಸಿಗರು ಬರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿದೆ. ಆದ್ದರಿಂದ, ಪರಿಸ್ಥಿತಿಯನ್ನು ಅವಲೋಕಿಸಿ ಜಿಲ್ಲಾಡಳಿತವೇ ಹೊಗೆನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅನುಮತಿ ನೀಡಲಿದೆ’ ಎಂದು‘ಪ್ರಜಾವಾಣಿ’ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್.ಮನೋಜ್ ಕುಮಾರ್ ತಿಳಿಸಿದರು.