ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಇಆರ್‌ಸಿ ಅಧ್ಯಕ್ಷರಾಗಿ ಪಿ. ರವಿಕುಮಾರ್‌ ನೇಮಕ

Last Updated 6 ಜೂನ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನೂತನ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರದ ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.

ಕೆಇಆರ್‌ಸಿ ಅಧ್ಯಕ್ಷರ ಆಯ್ಕೆಗೆ ಸಮಿತಿ ನೇಮಿಸಲಾಗಿತ್ತು. ರವಿಕುಮಾರ್‌ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದರು. ನೇಮಕಾತಿ ಸಮಿತಿ ಶಿಫಾರಸಿನಂತೆ ರವಿಕುಮಾರ್‌ ಅವರನ್ನು ಆಯ್ಕೆಮಾಡಿ ಇಂಧನ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಮುಂದಿನ ಐದು ವರ್ಷಗಳ ಅವಧಿಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ರವಿಕುಮಾರ್‌ 1984ರ ಬ್ಯಾಚ್‌ನ ಐಎಎಸ್‌ ಅಧಿಕಾರಿಸ. 2020ರ ಡಿಸೆಂಬರ್‌ ಅಂತ್ಯದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ಅವರು 2022ರ ಮೇ 31ರಂದು ನಿವೃತ್ತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT