ಪ್ರಕರಣವೇನು?: ಜಾಧವ್ 1983ರಲ್ಲಿ ಕರ್ನಾಟಕ ನೀರಾವರಿ ನಿಗಮದ ಕಾರ್ಯಕಾರಿ ಎಂಜಿನಿಯರ್ ಕಚೇರಿಯಲ್ಲಿ ದಿನಗೂಲಿ ನೌಕರರಾಗಿ ನೇಮಕಗೊಂಡಿದ್ದರು. 1993ರಲ್ಲಿ ಅವರ ಸೇವೆ ಕಾಯಂಗೊಂಡಿತ್ತು. 2018 ರಲ್ಲಿ ನಿವೃತ್ತಿ ಹೊಂದಿದ್ದರು. ಸೇವೆಗೆ ಅನುಗುಣವಾಗಿ ಪಿಂಚಣಿಸೇರಿದಂತೆ ಸೇವಾ ಸೌಲಭ್ಯ ನೀಡಲು ಸರ್ಕಾರಕ್ಕೆ ಕೋರಿದ್ದರು. ಆದರೆ, 2013ರಲ್ಲಿ ಕಾಯಾಮಾತಿ ಆದೇಶ ಹಿಂಪಡೆದಿದ್ದ ಕಾರಣ ಸರ್ಕಾರ ಅವರಿಗೆ ಪಿಂಚಣಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಜಾಧವ್ ಕೆಎಟಿಗೆ ಅರ್ಜಿ ಸಲ್ಲಿಸಿದ್ದರು.